Monday, August 10, 2009

Vadiraajamunipa

ವಾದಿರಾಜಮುನಿಪ ಹಯಮುಖ
ಪಾದಕಮಲ ಮಧುಪ IIಪII

ನೀ ದಯದಲಿ ತವಪಾದಧ್ಯಾನವನು
ಆದರದಲಿ ಕೊಟ್ಟಾದರಿಸೆನ್ನನು IIಅಪII

ಮೂಷಕಬಿಲದಿಂದ ಉದರ ಪೋಷಕ ಬರಲಂದು
ವಾಸುಕಿ ಭಯದಿ ನಿಮ್ಮಾಸನದೆಡೆ ಬರೆ
ಕ್ಲೇಶ ಕಳೆದು ಸಂತೋಷಗೈಸಿದೆ II೧II

ಮುಂದೆ ಭೂತನರನ ಪ್ರೇರಿಸಿ ಹಿಂದೆ ಒಬ್ಬ ನರನ
ನಿಂದರಿಸಿ ಆನಂದದಿಂದ ಜನ-
ವೃಂದ ನೋಡುತ್ತಿರೆ ಅಂದಣ ನಡೆಸಿದ್ಯೊ II೨II

ಶಾಸ್ತ್ರ ಪ್ರಸಂಗದಲಿ ನಾರಾಯಣಭೂತರ ಗೆಲಿದಲ್ಲೆ
ಖ್ಯಾತಿಯಿಂದ ಬಹು ಮಾತನಾಡಿ

ಶ್ರೀನಾಥನ ಮಂದಿರ ಪ್ರೀತಿಲಿ ತರಿಸಿದ್ಯೊ II೩II

ತುರಗವದನ ಪಾದ ಭುಜಗಳಲಿ
ಧರಿಸಿಕೋಂಡು ಮೋದ ಕಡಲೆಮಡ್ಡಿಯನು
ಕರದಿಂದುಣಿಸಿದ ಗುರುವರಶೇಖರ II೪II

ಆ ಮಹಾ ಗೋಪಾಲವಿಠಲ ತಾಮರಸದಳಗಳ
ಧೀಮಂತರಿಗೆ ಸುಕಾಮಿತವನು ಕೊಡುವ
ಆ ಮಹಾಮಹಿಮ II೫II

No comments: