Monday, August 10, 2009

Ratuna dorakitalla

ರತುನ ದೊರಕಿತಲ್ಲ ಎನಗೆ ದಿವ್ಯ ರತುನ ದೊರಕಿತಲ್ಲ ಪ

ರತುನ ದೊರಕಿತು ಎನ್ನ ಜನ್ಮ

ಪವಿತ್ರವಾಯಿತು ಈ ದಿನವು ನಾ
ಯತುನಗೈವುತ ಬರುತಿರಲು

ಪ್ರಯತನವಿಲ್ಲದೆ ವಿಜಯರಾಯರೆಂಬ ಅ ಪ

ಪಥದಿ ನಾ ಬರುತಿರಲು ಥಳಥಳವೆಂದು
ಅತಿಕಾಂತಿ ಝಳಪಿಸಲು ಬೆರಗಾಗುತ್ತ
ಅತಿಚೋದ್ಯವ ಕಾಣಲು ಸೇವಿಸುತಿರೆ
ಸತತ ಕರಪಿಡಿದಾದರಿಸಿ ಮನೋ
ರಥವ ಪೂರೈಸುತಲಿ ದಿವ್ಯ

ಸನ್ಮತಿಯ ಪಾಲಿಸಿ ಮೋಕ್ಷ ಸುಪಥವ
ಅತಿಶಯದಿ ತೋರುತಲಿ ಪೊರೆಯುವ ೧

ಜ್ಞಾನವೆಂಬೋ ಪುತ್ಥಳಿ ಕಂಬಿಯಲಿ
ಅಣಿಮುತ್ತಿನ ಭಕ್ತಿಲಿ ಸುಕೃತಮಾತಾ
ನಾನಾ ವಿದ್ಹವಳದಲಿ ಸೇರಿಸುತಿರೆ
ಪ್ರಾಣಪದಕವೆಂಬ ಮಾಲಾನು
ಮಾನವಿಲ್ಲದೆ ಕೊರಳಿಗ್ಹಾಕುತ
ಗಾನದಿಂ ಕುಣಿಯುತಲಿ ಪಾಡುತ ೨

ದೀನ ಜನರುದ್ಧಾರ ಗಯ್ಯುವ
ಶೋಧಿಸಿ ಗ್ರಂಥಗಳ ಸುಳಾದಿಯ
ಮೋದದಿಂದಲಿ ಬಹಳ ಕವಿತೇ ಮಾಡಿ
ಸಾಧುಜನಕೆ ಸುಕಾಲ ಆನಂದವಿತ್ತು
ವಾದಿ ಜನರನು ಗೆದ್ದು ವಾದಿಸಿ
ಮಾಧವ ಜಗನ್ನಾಥವಿಠಲನ
ಪಾದಕಮಲಕೆ ಮಧುಪನಂದದಿ
ಸಾದರದಿ ತೋರಿಸುತ ಮೆರೆಯುವ ೩

No comments: