Monday, August 10, 2009

Yaak nirdayanaade

ಯಾಕೆ ನಿರ್ದಯನಾದೆ ಎಲೊ ದೇವನೆ ಪ
ಶ್ರೀ ಕಾಂತ ಎನಮೇಲೆ ಎಳ್ಳಷ್ಟು ದಯವಿಲ್ಲ ಅ ಪ

ಕಂಗೆಟ್ಟು ಕಂಭದಲಿ ಒಡೆದು ಬಳಲಿ ಬಂದು

ಹಿಂಗದೆ ಪ್ರಹ್ಲಾದನಪ್ಪಿಕೊಂಡೆ
ಮಂಗಳಪದವಿತ್ತು ಮನ್ನಿಸಿದೆ ಅವ ನಿನಗೆ
ಬಂಗಾರವೆಷ್ಟು ಕೊಟ್ಟನು ಪೇಳೊ ಹರಿಯೆ ೧

ಸಿರಿದೀವಿಗಹೀಲದೆ ಸೆರಗು ಸಂವರಿಸಿದೆ
ಗರುಡನ ಮೇಲೆ ಗಮನವಾಗದೆ
ಭರದಿಂದ ನೀ ಬಂದು ಕರಿಯನುದ್ಧರಿದೆ
ಕರಿರಾಜ ಎಷ್ಟು ಕನಕವ ಕೊಟ್ಟ ಹರಿಯೆ ೨

ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೇ
ನಿಜದಿ ರುಕ್ಮಾಂಗದನು ನಿನ್ನ ಮೊಮ್ಮಗನೆ
ಭಜನೆಗವರೇ ಹಿತರೆ ನಾ ನಿನಗೆ ಅನ್ಯನೇ
ತ್ರಿಜಗಪತಿ ಸಲಹೆನ್ನ ಪುರಂದರವಿಠಲ ೩

No comments: